ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾಮಿ ವಿವೇಕಾನಂದರ 156ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಚಂದನಗೌಡ ಮಾಲಿಪಾಟೀಲ ಅವರು ಮಾತನಾಡುತ್ತ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ಓದಿ ಅದನ್ನು ಅನುಸರಿಸಬೇಕು. ನಾವು ಒಳ್ಳೆಯದನ್ನು ಬೇರೆಯವರಿಗೆ ಹೇಳುವುದಕ್ಕಿಂತ ಮೊದಲು ಅದು ನಮ್ಮಿಂದಲೇ ಪ್ರಾರಂಭವಾಗಬೇಕು ಎಂದು ನುಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಆನಂದ ಕೋರಿಕಂತಿಮಠ ಮಾತನಾಡುತ್ತ ಸ್ವಾಮಿ ವಿವೇಕಾನಂದರು ಯಾವುದನ್ನು ಪ್ರಶ್ನೆ ಮಾಡದೆ ಅದನ್ನು ಸುಲಭವಾಗಿ ಒಪ್ಪಿಕೊಳ್ಳುತ್ತಿರಲಿಲ್ಲ ರಾಮಕೃಷ್ಣ ಪರಮಹಂಸರಿಗೆ ಅನೇಕ ಪ್ರಶ್ನೆಗಳನ್ನು ಕೇಳಿ ಕೊನೆಗೆ ತಮ್ಮ ಗುರುಗಳೆಂದು ಒಪ್ಪಿಕೊಂಡರು. ಈ ದೇಶದ ಧರ್ಮ, ತತ್ವ, ಸಿದ್ಧಾಂತಗಳನ್ನು ಇಡೀ ಜಗತ್ತಿಗೆ ಸಾರಿ ಹೇಳಿದರು ಮತ್ತು ನಮ್ಮ ಹೃದಯದಲ್ಲಿ ಪ್ರೀತಿ ಇದ್ದರೆ ಬೇರೆಯವರನ್ನು ಪ್ರೀತಿಯಿಂದ ಕಾಣಬಹುದು ಎಂದು ನುಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಚೇರಮನ್ರಾದ ಡಾ.ಸುರೇಶ ಬಿರಾದಾರವರು ಸ್ವಾಮಿ ವಿವೇಕಾನಂದರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭಾಶಯವನ್ನು ಹೇಳಿದರು.
ಮಕ್ಕಳು ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು. ಅವರ ಘೋಷಣೆಗಳನ್ನು ಕೂಗಿ ಜಯಕಾರ ಹಾಕಿದರು. ಶಿಕ್ಷಕರಾದ ಪ್ರವೀಣಕುಮಾರ ಗೆಣ್ಣೂರ, ಎ.ಎಚ್.ಸಗರ, ಅನೀಲಕುಮಾರ ಬಾಗೇವಾಡಿ, ಸುರೇಖಾ ಪಾಟೀಲ, ಭಾರತಿ ಪಾಟೀಲ,ಹಫೀಜ ಹುಬ್ಬಳಿ, ವೈಶಂಪಾಯನ, ಆರ್.ಕೆ. ಕಡೆಮನಿ, ಅವಟಿ, ರಾಜೇಶ್ವರಿ ಪಟ್ಟಣ, ಮಮತಾ ಪಾಟೀಲ ಇತರರು ಉಪಸ್ಥಿತರಿದ್ದರು.[/vc_column_text][/vc_column][/vc_row]